Breaking News

ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ.

Spread the love

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಹಿತಿ ನೀಡಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ನಾಳೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸ್ಪೀಕರ್ ಕಾಗೇರಿ ಅವರು ನಾಳೆ ಬೆಳಗ್ಗೆ 10.30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದೆ. ಎಲ್ಲಾ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ. ಸಭೆಯ ಎಲ್ಲಾ ದಿನದ ಕಾರ್ಯ ಕಲಾಪದ ವಿವರಗಳನ್ನ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಚರ್ಚೆ ಮಾಡಿ ಕಾರ್ಯಕಲಾಪದ ವಿವರ ಪಡೆಯುತ್ತೇವೆ ಎಂದರು. ಇನ್ನು ಸರ್ಕಾರ ಇದುವರೆಗೂ ಸದನದಲ್ಲಿ ಯಾವ ಯಾವ ಬಿಲ್ ಮಂಡಿಸಲಿದೆ ಎನ್ನುವುದನ್ನು ಕಳುಹಿಸಿಲ್ಲ. ಬಿಲ್ ಕಳಿಸ್ತೀವಿ ಎಂದು ಹೇಳಿದ್ದಾರೆ, ಆದರೆ ಇದುವರೆಗೂ ಬಂದಿಲ್ಲ. ನಾಳೆಯೊಳಗೆ ಕಳುಹಿಸುತ್ತೇವೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಅಂತಾ ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಕಲಾಪ ಚೆನ್ನಾಗಿ ನಡೆಯುವ ಅಗತ್ಯತೆ ಇದೆ. ಇಷ್ಟೆಲ್ಲ ವ್ಯವಸ್ಥೆ ಮಾಡಿ ಕಲಾಪ ಚೆನ್ನಾಗಿ ನಡೆಯಲಿಲ್ಲ ಅಂದ್ರೆ ಹೇಗೆ ಎಂದ ಅವರು, ಎಲ್ಲಾ ಶಾಸಕರಿಗೂ ಸಕ್ರಿಯವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ. ನಿಯಮಾನುಸಾರ ಎಲ್ಲರಿಗೂ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದರು. ಇನ್ನು ಈ ಅಧಿವೇಶನದಲ್ಲಿ ಎರಡು ದಿನವಾದರೂ ಉತ್ತರ ಕರ್ನಾಟಕ ಭಾಗದ ವಿಷಯ ಚರ್ಚೆ ಮಾಡಬೇಕು ಎಂದು ಸಲಹೆಗಳು ಬಂದಿವೆ. ಬಿಎಸಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಅದೇ ರೀತಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತದೆ ಎಂದು ಸದಸ್ಯರು ಗೈರು ಹಾಜರಾಗುವುದು ಸರಿಯಲ್ಲ ಎಂದು ಇದೇ ವೇಳೆ ಸ್ಪೀಕರ್ ಕಾಗೇರಿ ಕಿವಿಮಾತು ಹೇಳಿದರು.

ಒಟ್ಟಿನಲ್ಲಿ ಎರಡು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದರು. ಈ ಬಾರಿಯಾದ್ರೂ ಅಧಿವೇಶನದಲ್ಲಿ ಒಳ್ಳೆಯ ರೀತಿ ಚರ್ಚೆಯಾಗಿ. ಈ ಭಾಗದ ಜ್ವಲಂತ ಸಮಸ್ಯೆಗಳು ಪರಿಹಾರವಾಗಲಿ ಎಂಬುದೇ ಎಲ್ಲರ ಆಶಯವಾಗಿದೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ