Breaking News

ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಸದಸ್ಯ ಎರಡು ಲಕ್ಷ ಘೋಷಣೆ ಮಾಡಿದ್ದಾರೆ.

ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದರು. ಆದರೆ ಅನಗತ್ಯ ಗಲಭೆ ಮಾಡಿದವರ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಬೇರೆಯದ್ದೇ ಸಂದೇಶ ರವಾನೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ ಎನ್ನಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾದರೆ ಕೊಡಿ. ಆದರೆ ಈ ವಿಷಯ ಮಾತ್ರ ಬಹಿರಂಗ ಆಗಬಾರದು ಎಂದು ಕಾಂಗ್ರೆಸ್ ನಾಯಕರು ಎಂದಿದ್ದಾರೆ. ಎಲ್ಲಿಯೂ ಸಹ ಪರಿಹಾರ ಕೊಟ್ಟೆ ಅಂತ ಹೇಳಬಾರದು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ