Breaking News
Home / ಜಿಲ್ಲೆ / ಬೆಂಗಳೂರು / ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.

ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಸದಸ್ಯ ಎರಡು ಲಕ್ಷ ಘೋಷಣೆ ಮಾಡಿದ್ದಾರೆ.

ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದರು. ಆದರೆ ಅನಗತ್ಯ ಗಲಭೆ ಮಾಡಿದವರ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಬೇರೆಯದ್ದೇ ಸಂದೇಶ ರವಾನೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ ಎನ್ನಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾದರೆ ಕೊಡಿ. ಆದರೆ ಈ ವಿಷಯ ಮಾತ್ರ ಬಹಿರಂಗ ಆಗಬಾರದು ಎಂದು ಕಾಂಗ್ರೆಸ್ ನಾಯಕರು ಎಂದಿದ್ದಾರೆ. ಎಲ್ಲಿಯೂ ಸಹ ಪರಿಹಾರ ಕೊಟ್ಟೆ ಅಂತ ಹೇಳಬಾರದು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ