Breaking News

ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ.

Spread the love

ಹುಬ್ಬಳ್ಳಿ: ರಾಯಚೂರಿನ ಸಿಂದಗಿ ಹಾಗೂ ಕಲಬುರಗಿಯ ಬಡದಲ್ ಹಳ್ಳಿಯ ನಡುವೆ 177 ಕಿಮೀ ಉದ್ಧದ ಗ್ರೀನ್​​ಫೀಲ್ಡ್​ ಹೆದ್ದಾರಿ ನಿರ್ಮಾಣವಾಗಲಿದ್ದು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಭಾರತ್​​ ಮಾಲಾ ಯೋಜನೆಯ ಪರಿಯೋಜನೆಯಡಿ ಆರು ಪಥದ ಹೆದ್ದಾರಿ ನಿರ್ಮಾಣ ಆಗಲಿದೆ.

ಉತ್ತರ ಕರ್ನಾಟಕದಲ್ಲಿ ನಿರ್ಮಾಣವಾಗಲಿರುವ ಮೊದಲ ಆರು ಪಥದ ರಾಷ್ಟ್ರೀಯ ಹೆದ್ದಾರಿ ಆಗಲಿದ್ದು, ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ.

ರಾಷ್ಟ್ರೀಯ ಮಾಧ್ಯಮದ ವರದಿಯ ಅನ್ವಯ, ಕೇಂದ್ರ ಸರ್ಕಾರ ನಾಲ್ಕು ಪ್ಯಾಕೇಜ್​​ಗಳಲ್ಲಿ 203.1 ಕಿಮೀ ಉದ್ದದ 6 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಟೆಂಡರ್​ ಅನ್ನು ಫೈನಲ್​ ಮಾಡಿದೆ. ಇದು ಮಹಾರಾಷ್ಟ್ರದ ಅಕ್ಕಲಕೋಟದಿಂದ ರಾಯಚೂರಿನ ಸಿಂದಗಿ ನಡುವೆ ನಿರ್ಮಾಣ ಆಗಲಿದೆ. ನಾಲ್ಕು ಪ್ಯಾಕೇಜ್​​ಗಳಲ್ಲಿ 2,3,4 ಪ್ಯಾಕೇಜ್​​ಗಳು 177 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದ್ದು, ಇದರಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಹೆದ್ದಾರಿ ನಿರ್ಮಾಣ ಕಾರ್ಯ ನಡೆಯಲಿದೆ. ಮೊದಲ ಪ್ಯಾಕೇಜ್​ ಸಂಪೂರ್ಣವಾಗಿ ಮಹಾರಾಷ್ಟ್ರದಲ್ಲಿ ನಿರ್ಮಾಣವಾಗಲಿದೆ.


Spread the love

About Laxminews 24x7

Check Also

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

Spread the love“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ