Breaking News

ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ

Spread the love

ಹುಬ್ಬಳ್ಳಿ(ಧಾರವಾಡ): ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ ನಡೆಸಲಿದೆಕಳೆದ ನವೆಂಬರ್​ ತಿಂಗಳಿನ‌ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿ ‌ಸಂಭವಿಸಿದೆ. ಹೀಗಾಗಿ, ಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದೆ. ನವೆಂಬರ್‌ನಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲಿಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ‌. ಪರಿಶೀಲನೆಗೆೆಂದು ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಿ ಕೊಡಲಿದೆ..

ಕೇಂದ್ರ ನೆರೆ ಅಧ್ಯಯನ ತಂಡದ ಪರಿಶೀಲನೆಗೂ ಮುನ್ನ, ಧಾರವಾಡ ಡಿಸಿ ನಿತೇಶ್ ಪಾಟೀಲ್ ಹಾಗೂ ವಿವಿಧ ಅಧಿಕಾರಿಗಳು ಹುಬ್ಬಳ್ಳಿಯ ಸರ್ಕಿಟ್ ಹೌಸ್​ನಲ್ಲಿ ಕೇಂದ್ರ ಅಧ್ಯಯನ ತಂಡದ ಸದಸ್ಯರಾದ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಗುರುಪ್ರಸಾದ ಜೆ ಮತ್ತು ಕೇಂದ್ರ ಸರ್ಕಾರದ ಹಣಕಾಸು ಮಂತ್ರಾಲಯದ ಮಹೇಶ ಕುಮಾರ್‌ ಅವರಿಗೆ ಜಿಲ್ಲೆಯ ಅತಿವೃಷ್ಠಿ( ಮಳೆ ಹಾನಿ) ಹಾನಿ ಕುರಿತು ಫೋಟೋ ಗ್ಯಾಲರಿ ಹಾಗೂ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ., ಉಪ ವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ. ಹಾಗೂ ಕೃಷಿ, ತೋಟಗಾರಿಕೆ, ಮಹಾನಗರ ಪಾಲಿಕೆ, ನೀರಾವರಿ, ಲೋಕೋಪಯೋಗಿ, ಪಂಚಾಯತ್​ ರಾಜ್ ಇಂಜಿನಿಯರಿಂಗ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ