Breaking News

ಭೂಕಬಳಿಕೆ ಪ್ರಕರಣ: ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ;

Spread the love

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಡಿಕಾರಿದ್ಧಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಮಾದಪ್ಪ ಎನ್ನುವವರು ಐವರ ಮೇಲೆ ಕೇಸ್ ಹಾಕಿದ್ದಾರೆ. ಸಚಿವ ಭೈರತಿ, ಎಮ್​ಎಲ್​ಸಿ ಶಂಕರ್ ಸೇರಿ ಐವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ಕೋರ್ಟ್‌ನಿಂದ ಈಬಗ್ಗೆ ಆದೇಶ ಬಂದಿದೆ ಎಂದು ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 

ಕೂಡಲೇ ಸಚಿವ ಸಂಪುಟದಿಂದ ಭೈರತಿರನ್ನ ವಜಾಗೊಳಿಸಲಿ. ಸಮನ್ಸ್ ಬಂದಾಗಲೇ ಭೈರತಿ ರಾಜೀನಾಮೆ ನೀಡಬೇಕಿತ್ತು. ಭೈರತಿ ಬಸವರಾಜ್‌ರಿಂದ ಸಿಎಂ ರಾಜೀನಾಮೆ ಪಡೆಯಲಿ. ರಾಜೀನಾಮೆ ನೀಡದಿದ್ದರೆ ಸಂಪುಟದಿಂದ ವಜಾಗೊಳಿಸಲಿ. ಭೈರತಿ ಪವರ್ ಫುಲ್‌ ಪರ್ಸನ್ ಎಂದು ಜಡ್ಜ್‌ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೈರತಿ ಬಸವರಾಜ್‌ ಆಗ ಸಿದ್ದರಾಮಯ್ಯನ ಶಿಷ್ಯ, ಈಗ ಅಲ್ಲ. ಈಗ ಅವನು ನನ್ನ ಶಿಷ್ಯನೆಂದು ಒಪ್ಪಿಕೊಳ್ಳಲೂ ನಾನು ಸಿದ್ಧನಿಲ್ಲ ಎಂದು ಗರಂ ಆಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ