Breaking News

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ : ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ `ಮಹಾ’ ಸಿಎಂ ಉದ್ಧವ್ ಠಾಕ್ರೆ!

Spread the love

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಕರ್ನಾಟಕದ ಮರಾಠಿ ಜನರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಮೂಲಕ ಹಿಂದೂ, ವಿಕೃತ ಮನೋಭಾವವನ್ನು ಪ್ರಧಾನಿಯೇ ಪರಿಶೀಲಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಲ್ಲಿನ ರಾಜ್ಯ ಸರ್ಕಾರವನ್ನು ಕೇಳಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಅತ್ಯಂತ ಖಂಡನೀಯ. ಛತ್ರಪತಿ ಶಿವಾಜಿ ಮಹಾರಾಜರು ದೇಶದ ಎಲ್ಲರ ದೈವ, ಪ್ರತಿಮೆ ಮೇಲಿನ ದಾಳಿ ಖಂಡನೀಯ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ