Breaking News

ರಾಜ್ಯ ವಿಧಾನಸಭೆಯಲ್ಲಿ ‘ಮತಾಂತರ ನಿಷೇಧ ವಿಧೇಯಕ’ ಮಂಡನೆ

Spread the love

ಬೆಂಗಳೂರು: ನಿನ್ನೆ ರಾಜ್ಯ ಸಚಿವ ಸಂಪುಟದಲ್ಲಿ ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಲಾಗಿದ್ದಂತ ಮತಾಂತರ ವಿಧೇಯಕ ಮಸೂಧೆಯನ್ನು ಅಂತೂ ಇಂತೂ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಇದೀಗ ಮಂಡಿಸಿದೆ.

ಇಂದು ವಿಧಾನಸಭೆಯ ಕಲಾಪದ ಪಟ್ಟಿಯಲ್ಲಿ ಮತಾಂತರ ನಿಷೇಧ ವಿಧೇಯಕದ ಮಂಡನೆಯನ್ನು ಸೇರಿಸಿರಲಿಲ್ಲ.

ಇದರ ನಡುವೆಯೂ ಮಧ್ಯಾಹ್ನದ ಭೋಜನದ ವಿರಾಮದ ನಂತ್ರ ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಮತಾಂತರ ನಿಷೇಧದ ವಿಧೇಯಕವನ್ನು ಮಂಡನೆ ಮಾಡಲಾಯಿತು.

ಇದಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ಇಂದು ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡೋ ಬಗ್ಗೆ ಯಾವುದೇ ಮಾಹಿತಿ ನೀಡದಂತೆ ಮಂಡಿಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂಬುದಾಗಿ ಕಿಡಿಕಾರಿದರು.

ಈ ವೇಳೆ ಸಚಿವ ಮಾಧುಸ್ವಾಮಿ ಮಾತನಾಡಿ ನಾವು ಹೇಳಿದಂತೆ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಅದರ ಹೊರತಾಗಿ ಯಾವುದೆ ಮುಚ್ಚು ಮರೆಯಿಂದ ಮಸೂದೆ ಮಂಡಿಸ್ತಾ ಇಲ್ಲ ಎಂಬುದಾಗಿ ಹೇಳಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ