ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ ಎಂದು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ.
ಬೆಳಗಾವಿಯ ಕೆಎಲ್ಇ ಕ್ಯಾಂಪಸ್ನಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಇಲಾಖೆಯ ಸಮಸ್ಯೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡರು. ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಂಬಳ, ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ ಸರಿಯಾದ ವೇತನ ನೀಡುತ್ತಿರುವ ಬಗ್ಗೆಯೂ ಪರಿಶೀಲಿಸಿದರು. ಎನ್ಎಚ್ಎಮ್ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಪರಿಶೀಲನಾ ಸಭೆ ಅವಲೋಕಿಸಿ, ರಾಷ್ಟ್ರೀಯ ಯೋಜನೆಗಳು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಪ್ರಶ್ನಿಸಿದರು. ರೋಗಿಗಳೊಂದಿಗೆ ಕುಳಿತುಕೊಂಡು ಊಟ ಮಾಡಿ ರುಚಿ ಪರಿಶೀಲಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.