Home / ರಾಜಕೀಯ / ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು.

ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವರೇ ತಬ್ಬಿಬ್ಬು! ಒಪ್ಪಲೂ ಆಗದೆ, ನಿರಾಕರಿಸಲೂ ಆಗದೆ ಪರದಾಡಿದ್ರು.

Spread the love

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ದೌಡಾಯಿಸಿದ್ದ ಕಾವಿಧಾರಿಗಳಿಬ್ಬರ ಬೇಡಿಕೆ ಕೇಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಬ್ಬಿಬ್ಬಾದ ಪ್ರಸಂಗವಿದು.

ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಗೆ ಧಾವಿಸಿದ ಸ್ವಾಮೀಜಿಗಳಿಬ್ಬರು ಲಿಖಿತ ಮನವಿಯೊಂದನ್ನು ಸಲ್ಲಿಸಿ, ತಮ್ಮ ಕಾರುಗಳಿಗೆ ಸೈರನ್​ ಬೇಕೆಂಬ ಬೇಡಿಕೆಯಿಟ್ಟರು ಎಂದು ಮೂಲಗಳು ತಿಳಿಸಿವೆ.

ಸ್ವಾಮೀಜಿಗಳಿಬ್ಬರ ಬೇಡಿಕೆ ಕೇಳಿ ಅಚ್ಚರಿಗೊಂಡ ಸಚಿವರು, ನನ್ನ ಕಾರಿಗೇ ಸೈರನ್​ ಇಲ್ಲ. ನಿಮ್ಮ ಕಾರರಿಗೆ ಏಕೆ ಬೇಕು ಎಂದು ಪ್ರಶ್ನಿಸಿದರು ಎನ್ನಲಾಗಿದೆ.

ಮಾರ್ಗಮಧ್ಯೆ ಸಂಚಾರ ದಟ್ಟಣೆಯಿಂದ ಸಕಾಲದಲ್ಲಿ ನಿಗದಿತ ಸ್ಥಳಕ್ಕೆ ತಲುಪಲಾಗದು. ಪದೇಪದೆ ಈ ಸಮಸ್ಯೆ ಅನುಭವಿಸುತ್ತಿದ್ದು, ಕಾರಿಗೆ ಸೈರನ್​ ಅಳವಡಿಸಿದರೆ ಅನುಕೂಲವಾಗಲಿದೆ ಎಂದು ಸ್ವಾಮೀಜಿಗಳಿಬ್ಬರೂ ವಿವರಿಸಿದ್ದಾರೆ. ಸೈರನ್​ ಬೇಡಿಕೆಯನ್ನು ನಿರಾಕರಿಸಲಾಗದೆ, ಒಪ್ಪಿಕೊಳ್ಳಲೂ ಆಗದ ಆರಗ, ‘ಆಯಿತು ಪರಿಶೀಲಿಸಿ ಕ್ರಮಕೈಗೊಳ್ಳುವೆ’ ಎಂಬ ಭರವಸೆ ನೀಡಿ ಅವರನ್ನು ಸಾಗಹಾಕಿದರು ಎಂದು ಮೂಲಗಳು ಮಾಹಿತಿ ನೀಡಿವೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ