Breaking News

ಜೆಡಿಎಸ್​ ಮುಖಂಡನ ಪುತ್ರನ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಲೇಡಿ ಎಸ್​ಐ ​ಜತೆಗಿನ ಲವ್ವಿಡವ್ವಿಯೇ ಮುಳುವಾಯ್ತಾ?

Spread the love

ಮೈಸೂರು: ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಲೇಡಿ ಸಬ್‌ ಇನ್ಸ್‌ಪೆಕ್ಟರ್​ ಹೆಸರು ತಳುಕು ಹಾಕಿಕೊಂಡಿದೆ.

ನಿನ್ನೆ(ಡಿ.23) ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್​ನಲ್ಲಿ ಪ್ರದೀಪ್​ ನೇಣಿಗೆ ಶರಣಾಗಿದ್ದು, ಈ ಸಾವಿಗೆ ಲೇಡಿ ಸಬ್​ ಇನ್ಸ್‌ಪೆಕ್ಟರ್ ಜತೆಗಿನ ಪ್ರೇಮಪುರಾಣವೇ ಕಾರಣ ಎಂದು ಆಪ್ತ ವಲಯದಲ್ಲಿ ಗುಸುಗುಸು ಶುರುವಾಗಿದೆ.

 

ಪ್ರದೀಪ್​ ತಂದೆ ಬೆಳವಾಡಿ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಜೆಡಿಎಸ್​ನ ಖಜಾಂಚಿ. ಪ್ರದೀಪ್​ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ. ಇನ್ನು ಪ್ರದೀಪ್​ಗೆ ಈಗಾಗಲೇ ಮದುವೆ ಆಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಲೇಡಿ ಸಬ್‌ಇನ್ಸ್‌ಪೆಕ್ಟರ್ ಜತೆ ವಿವಾಹೇತರ ಸಂಬಂಧ ಇತ್ತು ಎನ್ನಲಾಗಿದೆ. ಆ ಲೇಡಿ ಸಬ್‌ಇನ್ಸ್‌ಪೆಕ್ಟರ್​ಗೂ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ.

ಪ್ರದೀಪ್​ ಮತ್ತು ಲೇಡಿ ಸಬ್​ ಇನ್​ಸ್ಪೆಕ್ಟರ್​ಗೆ ಬೇರೆ ಬೇರೆ ಮದುವೆ ಆಗಿದ್ದರೂ ಇವರಿಬ್ಬರ ನಡುವೆ ವಿವಾಹೇತರ ಸಂಬಂಧ ಇತ್ತಂತೆ. ನಿನ್ನೆ ರಾತ್ರಿ ಇವರಿಬ್ಬರೂ ಭೇಟಿ ಆಗಿದ್ದರಂತೆ. ಆ ವೇಳೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿತ್ತು. ಇದರಿಂದ ಬೇಸತ್ತ ಪ್ರದೀಪ್​, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರದೀಪ್ ಸಾವಿನ ಕುರಿತು ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ