Breaking News

ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : 93 ಲಕ್ಷ ಮನೆಗಳಿಗೆ ನಳ ಸಂಪರ್ಕ

Spread the love

ಬೆಳಗಾವಿ : ಜಲಜೀವನ ಮಿಶನ್ ಯೋಜನೆ (Jaljeevan Mission Yojana) ಅಡಿ ರಾಜ್ಯದಲ್ಲಿ 2023-24ರೊಳಗೆ 93ಲಕ್ಷ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದ್ದು,ನಿತ್ಯವೂ 10 ಸಾವಿರ ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗುತ್ತಿದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

 

ಸದಸ್ಯ ಎನ್.ರವಿಕುಮಾರ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಲಜೀವ ಮಿಶನ್ ಯೋಜನೆ ಅಡಿ ಇದುವರೆಗೆ 17.40ಲಕ್ಷ ಮನೆಗಳಿಗೆ ನಳಸಂಪರ್ಕ ಕಲ್ಪಿಸಲಾಗಿದೆ ಎಂದರು.

ಜಲಜೀವನ್ ಮಿಶನ್ ಯೋಜನೆಯಡಿ ನಳಸಂಪರ್ಕ ಒದಗಿಸಲು ಯಾವುದೇ ಅರ್ಜಿ ಒದಗಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿ ಸಚಿವ ಈಶ್ವರಪ್ಪ ಅವರು ರಾಜ್ಯದಲ್ಲಿ ಈವರೆಗೆ 41.91ಲಕ್ಷ ಮನೆಗಳಿಗೆ ಟ್ಯಾಪ್ ಮೂಲಕ ನೀರಿನ ಸಂಪರ್ಕ ಒದಗಿಸಲಾಗಿದೆ ಎಂದರು. ರಾಜ್ಯದಲ್ಲಿ 2019ರವರೆಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಜಾರಿಯಲ್ಲಿತ್ತು;ನಂತರ ಜಲಜೀವನ ಮಿಶನ್ ಯೋಜನೆಯೊಂದಿಗೆ ವಿಲೀನ ಮಾಡಲಾಗಿದೆ ಎಂದು ಅವರು ವಿವರಿಸಿದರು.


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ