Breaking News

ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆ

Spread the love

ಚಿಕ್ಕಮಗಳೂರು : ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆ ಉಪ್ಪಳ್ಳಿ ಚಿತಾಗಾರ ಸಮೀಪದ ಹಳ್ಳಕ್ಕೆ ಕಸ ಎಸೆದ ಯುವಕನನ್ನ ಮತಗಟ್ಟೆಗೆ ತೆರಳುವ ಸಮಯದಲ್ಲಿ ನೋಡಿದ ಸಿ.ಟಿ.ರವಿ ಅವರು ಕಾರ್ ನಿಂದ ಇಳಿದು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡರು , ಹೊಟ್ಟೆಗೆ ಏನು ತಿನ್ನುತ್ತಿ, ನೀನು ಯಾರ ಮಗ , ಇನ್ನೊಮ್ಮೆ ಕಸ ಎಸೆದದ್ದು ನೋಡಿದರೆ..

ಎಂದು ತರಾಟೆಗೆ ತೆಗೆದುಕೊಂಡರು.

ಯಗಚಿ ನದಿಗೆ ಸೇರುವ ಹಳ್ಳವಾಗಿದ್ದು, ಇಲ್ಲಿ ಭಾರಿ ಪ್ರಮಾಣದಲ್ಲಿ ಕಸ ಎಸೆಯುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ