Breaking News

ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ; ಅತ್ತ ಯಡಿಯೂರಪ್ಪ ದುಬೈ ಪ್ರವಾಸ! ಚರ್ಚೆಗೆ ಗ್ರಾಸ

Spread the love

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಭದ್ರನೆಲೆ ಕಂಡುಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರ ಛಲಬಲವೇ ಪ್ರಮುಖ ಕಾರಣ ಎಂಬುದು ಅವರ ರಾಜಕೀಯ ವೈರಿಗಳೂ ಗೊತ್ತು. ಹೀಗಿರುವಾಗ ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿರುವಾಗ ಅತ್ತ ಮಾಜಿ ಮುಖ್ಯಮಂತ್ರಿ ದುಬೈ ಪ್ರವಾಸದಲ್ಲಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಹೌದು. ದುಬೈ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮತ್ತು ಮೊಮ್ಮಕ್ಕಳ ಜೊತೆಗೆ ಬಿಎಸ್ ಯಡಿಯೂರಪ್ಪ ಪ್ರವಾಸ ಕೈಗೊಂಡಿದ್ದಾರೆ.

ಮಂಗಳವಾರ ದುಬೈ ಎಕ್ಸ್ ಪೋ -2020ಗೆ ಭೇಟಿ ನೀಡಿರುವ ಯಡಿಯೂರಪ್ಪ, ಭಾರತದ ಪೆವಿಲಿಯನ್ ಅತ್ಯದ್ಬುತವಾಗಿದೆ. ಮುಕ್ತ ವಾತಾವರಣ, ಅವಕಾಶಗಳು ಮತ್ತು ಬೆಳವಣಿಗೆ ಎನ್ನುವ ಆಶಯ ಅತ್ಯಂತ ಸಮರ್ಥವಾಗಿ ಪ್ರತಿಬಿಂಬಿತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ