Breaking News

ಅಧಿಕಾರಿಗಳ ಎಡವಟ್ಟಿನಿಂದ ರಾಜ್ಯದತ್ತ ಧಾವಿಸಿ ಬರುತ್ತಿದೆ ‘ಮಹಾ’ ಜಲಾಶಯದ ನೀರು: ಹೈ ಅಲರ್ಟ್‌ ಘೋಷಣೆ

Spread the love

ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದುಬಂದಿದೆ.

ಸುಮಾರು 18 ಅಡಿಗಳಷ್ಟು ಗೇಟ್ ಎತ್ತರಿಸಿ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದರು.

ಈ ವೇಳೆ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿದೆ, ಅಧಿಕಾರಿಗಳ ಎಡವಟ್ಟಿನಿಂದ ನದಿ ತೀರದ ಜನರು ಕಂಗೆಟ್ಟು ಹೋಗಿದ್ದು, ಇಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ವೇದಗಂಗಾ ನದಿ ತೀರದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕಂಗಾಲಾಗಿ ಹೋಗಿದ್ದಾರೆ. ಅಧಿಕಾರಿಗಳು ಮಾಡಿರುವ ಈ ಎಡವಟ್ಟಿನಿಂದ ಕರ್ನಾಟಕದತ್ತ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಒಟ್ಟಾರೆ ಎಂಟು ಟಿ ಎಂ‌ ಸಿ ಸಾಮರ್ಥ್ಯ ಇರುವ ಜಲಾಶಯ ಇದಾಗಿದೆ. ಆರು ಗೇಟ್‌ಗಳ ಪೈಕಿ ಒಂದು ಗೇಟ್ ದುರಸ್ಥಿ ಮಾಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ