Breaking News
Home / Uncategorized / ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!

ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!

Spread the love

ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ.

ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ ಈರುಳ್ಳಿ ಪೂರೈಕೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಾಗಲಿದ್ದು, ಸಹಜವಾಗಿಯೇ ಬೆಲೆ ಏರಿಕೆಯಾಗಲಿದೆ.

ಲಾಕ್‍ಡೌನ್‍ನಿಂದ ಜರ್ಜರಿತವಾಗಿದ್ದ ಜನ ಹಳ್ಳಿಯತ್ತ ಮುಖ ಮಾಡಿ ತಮಗಿದ್ದ ಅಲ್ಪಸ್ವಲ್ಪ ಜಮೀನಿನಲ್ಲಿ ಈರುಳ್ಳಿ ಬೆಳೆದು ಬೆಳೆ ನಿರೀಕ್ಷೆಯಲ್ಲಿದ್ದರು. ಆದರೆ, ಅಕಾಲಿಕ ಮಳೆ ಮತ್ತು ಪ್ರವಾಹದಿಂದ ಈ ಜಿಲ್ಲೆಗಳಲ್ಲಿನ ಸುಮಾರು ಒಂದು ಲಕ್ಷ ಹೆಕ್ಟರ್‍ನ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ರೋಗಕ್ಕೆ ತುತ್ತಾಗಿದೆ.

ಬೆಳೆ ಬೆಳೆದ ರೈತ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ಇತ್ತ ಗ್ರಾಹಕರಿಗೂ ಕೂಡ ಬೆಲೆ ಹೆಚ್ಚಾಗಿ ಗಾಯದ ಮೇಲೆ ಬರೆ ಎಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ

ದಿನಬಳಕೆಯ ಈರುಳ್ಳಿಗೆ 100ರೂ.ಗೆ 7ರಿಂದ 8 ಕೆಜಿ ಸಿಗುತ್ತಿತ್ತು. ಈಗ ಪೂರೈಕೆಯಲ್ಲಿ ಇಳಿಕೆಯಾಗಿರುವುದರಿಂದ ಬೆಲೆ ಏರಿಕೆಯಾಗಿ 100ರೂ.ಗೆ 4ರಿಂದ 5ಕೆಜಿಗೆ ಬಂದಿದೆ. ಬೆಳೆ ಹಾಳಾಗಿ ಪೂರೈಕೆಯಲ್ಲಿ ವ್ಯತ್ಯಯವಾದರೆ 100ರೂ.ಗೆ 2 ಅಥವಾ 3 ಕೆಜಿಯಾದರೂ ಆಶ್ಚರ್ಯವಿಲ್ಲ.

ಲಾಕ್‍ಡೌನ್ ಆಗುವ ಮುನ್ನ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಲಾಕ್‍ಡೌನ್ ಸಂದರ್ಭದಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಿ ಹಲವೆಡೆಯಿಂದ ಈರುಳ್ಳಿ ರಫ್ತು ಮಾಡಿಕೊಂಡು ಗ್ರಾಹಕರಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡಿತ್ತು.

ಈಗ ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಗುಜರಾತ್, ಮಧ್ಯ ಪ್ರದೇಶ ಭಾಗದಲ್ಲೂ ಕೂಡ ವಿಪರೀತ ಮಳೆಯಾಗಿ ಅಲ್ಲೂ ಕೂಡ ಬೆಳೆ ಹಾಳಾಗಿದೆ. ಪ್ರಸ್ತುತ ಇರುವ ಹಳೆಯ ದಾಸ್ತಾನು ಪೂರೈಕೆಯಾಗುತ್ತಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಂಗ್ರಹಿಸಿಟ್ಟಿರುವ ಈರುಳ್ಳಿ ಕೊಳೆಯ ತೊಡಗಿದೆ.


Spread the love

About Laxminews 24x7

Check Also

ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Spread the loveಶಿವಮೊಗ್ಗ: ಈಶ್ವರಪ್ಪ ಮೋದಿ ಫೋಟೋವನ್ನು ಬಳಕೆ ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಬಿಜೆಪಿಯವರು ಕೋರ್ಟ್‌ ಹಾಗೂ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ