Breaking News

ಕಂದಾಯ ಇಲಾಖೆ: ITI, PUC, B.E ಪಾಸ್‌; 3000 ಭೂಮಾಪಕರ ಹುದ್ದೆಗಳಿಗೆ ಅರ್ಜಿ

Spread the love

ಬೆಂಗಳೂರು: ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು 3000 ಭೂಮಾಪಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನೇಮಕಾತಿ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿ ನಂತರ ತಡೆ ಹಿಡಿದಿತ್ತು.

ಇದೀಗ ಮತ್ತೆ ನೇಮಕಾತಿಗೆ ಚಾಲನೆ ನೀಡಿದೆ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ (rdservices.karnataka.gov.in ) ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು. ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಭೂಮಾಪಕ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ ತಿಳಿಸಿದೆ.

ವಿದ್ಯಾರ್ಹತೆ: ಪಿಯುಸಿ (ವಿಜ್ಞಾನ ನಿಕಾಯ)ಯಲ್ಲಿ ಗಣಿತದಲ್ಲಿ ಶೇ 60 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಬಿ.ಇ, ಅಥವಾ ಸರ್ವೇ ಟ್ರೇಡ್‌ನಲ್ಲಿ ಐಟಿಐ, ಡಿಪ್ಲೋಮಾ ಪಡೆದಿರಬೇಕು.

ವಯಸ್ಸು: ಕನಿಷ್ಠ 18, ಗರಿಷ್ಠ 65 ವರ್ಷಗಳು

ಅರ್ಜಿ ಶುಲ್ಕ: ಅಭ್ಯರ್ಥಿಗಳು ನಾಡ ಕಚೇರಿಗಳಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್‌ ನೀಡಿ ₹ 1000 ಶುಲ್ಕ ಪಾವತಿಸಿ, ವಿಶಿಷ್ಟ ಅರ್ಜಿ ಸಂಖ್ಯೆ ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು, ಈ ಸಂಖ್ಯೆ ಇಲ್ಲದಿದ್ದರೆ ಆನ್‌ಲೈನ್‌ ಅರ್ಜಿ ತೆರೆಯುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯ ವಿವರಗಳನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ