Breaking News
Home / ರಾಜಕೀಯ / ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

Spread the love

ವಿಜಯಪುರ: ಒಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( Karnataka BJP Government ) ಸಿಎಂ ಬದಲಾವಣೆ ಇಲ್ಲ ಅಂತ ವರಿಷ್ಠರೇ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಬಗ್ಗೆ ಯಾವುದೇ ಸುಳಿವು ಕೂಡ ಇಲ್ಲ.

ಹೀಗೆ ಇರುವಾಗಲೇ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಅನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLA Basanagouda Patil Yatnal ) ಸಿಡಿಸಿದ್ದಾರೆ.

 

ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಸಚಿವ ಸಂಪುಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ದೊಡ್ಡ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯ ಪರಿಸ್ಥಿತಿಯನ್ನು ಪಿಎಂ ಗುಪ್ತಚರ ಇಲಾಖೆ ಗಮನಿಸುತ್ತಾ ಇದೆ ಎಂದರು.

ಸಚಿವರ ದಿನಚರಿಯಿಂದ ಹಿಡಿದು, ಅವರು ಕಚೇರಿಗೆ ಭೇಟಿ ನೀಡೋದು, ಕೆಲಸ ಮಾಡ್ತಾ ಇರೋದನ್ನೆಲ್ಲಾ ಪ್ರಧಾನಿಯವರು ಗಮನಿಸ್ತಾ ಇದ್ದಾರೆ. ಕಳೆದ ಸಂಕ್ರಾಂತಿಯ ವೇಳೆಗೆ ಬದಲಾವಣೆ ಬಗ್ಗೆ ಹೇಳಿದ್ದೇ, ಹಾಗೇ ಒಂದು ವಿಕೇಟ್ ಬಿದ್ದಿದೆ. ಈಗ ಮತ್ತೆ ಕಾದು ನೋಡಿ, ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಸಂಕ್ರಾಂತಿಯವರೆಗೆ ಕಾದು ನೋಡಿ ಎಂದು ಸ್ಪೋಟಕ ಬಾಂಬ್ ಸಿಡಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ