Breaking News

ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧ ಆತ್ಮಹತ್ಯೆ

Spread the love

ಮುದ್ದೇಬಿಹಾಳ: ರಜೆಗೆ ಬಂದಿದ್ದ ಭಾರತೀಯ ಸೇನೆಯ ಯೋಧಯೊಬ್ಬ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರೂರ ಗ್ರಾಮದಲ್ಲಿ ನಡೆದಿದೆ.

ಹಣಮಂತ್ರಾಯ ಶಿವಪ್ಪ ಹೂಗಾರ (30) ಮೃತ ವ್ಯಕ್ತಿ.

 

ಸಂಜೆಯಾದರೂ ಮನೆಗೆ ಬರಲಿಲ್ಲ ಎಂದು ಕುಟುಂಬದ ಸದಸ್ಯರು ಹೊಲಕ್ಕೆ ನೋಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಹಣಮಂತ್ರಾಯ ಭಾರತೀಯ ಸೇನೆಯಲ್ಲಿ ಜನರಲ್ ಡ್ಯೂಟಿ ಸೋಲ್ಜರ್ ಆಗಿ ಕಳೆದ 10-11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ರಾಜಸ್ತಾನದ ಗಡಿಭಾಗ ಉದಯಪುರ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ರಾಜ್ ರೈಫಲ್ಸ್ ನ 4ನೇ ಯುನಿಟ್ ನಲ್ಲಿ ಕೆಲಸ ಮಾಡುತ್ತಿದ್ದರು. 2 ದಿನಗಳ ಹಿಂದೆ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.

ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಸೇನೆಯಲ್ಲಿನ ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಇತ್ತೀಚೆಗೆ ಆಗ ಮಾನಸಿಕವಾಗಿ ಖಿನ್ನನಾಗಿರುತ್ತಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಸಿಪಿಐ ಆನಂದ ವಾಘ್ಮೋಡೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ