Breaking News

ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ.

Spread the love

ಚಾಮರಾಜನಗರ: ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ. ಅಂತ್ಯ ಸಂಸ್ಕಾರ ಮಾಡಬೇಕೆಂದರೆ ಶವ ಹೊತ್ತು ನದಿ ದಾಟಿ, ಅಲ್ಲಿರುವ ಜಮೀನುಗಳಲ್ಲೇ ಹೆಣ ಹೂಳಬೇಕು. ಇದು ಇಂದು ನಿನ್ನೆಯ ಸಮಸ್ಯೆಯಲ್ಲ ವರ್ಷಗಟ್ಟಲೆ ಗ್ರಾಮಸ್ಥರು ಪಡುತ್ತಿರುವ ಕಷ್ಟ.

ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇಂತಹ ಗಂಭೀರ ಸಮಸ್ಯೆ ಇದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನದಿ ದಾಟಲು ಇತ್ತೀಚೆಗೆ ಗ್ರಾಮಸ್ಥರೇ ಮರದ ಹಲಗೆಗಳ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಹೆಣ ಹೊರುವವರು ಜೀವ ಕೈಯಲ್ಲಿ ಹಿಡಿದು ಈ ಹಲಗೆಗಳ ಸೇತುವೆ ಮೇಲೆ ಸಾಗಬೇಕು ಶವ ಹೊತ್ತೊಯ್ಯುವಾಗ ಸ್ವಲ್ಪ ಯಾಮಾರಿದರು ಅಪಾಯ ತಪ್ಪಿದ್ದಲ್ಲ.

 


Spread the love

About Laxminews 24x7

Check Also

ರೈತರಿಗೆ ಜಮೀನುಗಳಿಗೆ ತೆರಳಲು ಸಮರ್ಪಕ ರಸ್ತೆ ಸೌಲಭ್ಯ ಕಲ್ಪಿಸಿ

Spread the loveಸವದತ್ತಿ: ಚುಳಕಿ ಗ್ರಾಮದ ರೈತರಿಗೆ ಜಮೀನುಗಳಿಗೆ ತೆರಳಲು ಸಮರ್ಪಕ ರಸ್ತೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮದ ರೈತರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ