Breaking News

ಕಡಲೆಕಾಯಿ ಸಾಲ ಹಿಂದಿರುಗಿಸಲು ಅಮೆರಿಕದಿಂದ ಭಾರತಕ್ಕೆ ಹಾರಿಬಂದ ಅಣ್ಣ ತಂಗಿ

Spread the love

ಕಾಕಿನಾಡ: 2010ರಲ್ಲಿ ಅಮೆರಿಕವಾಸಿಯಾಗಿದ್ದ ಕುಟುಂಬ ಕೆಲ ದಿನಗಳಿಗೆಂದು ಭಾರತಕ್ಕೆ ಬಂದಿತ್ತು. ಆ ಕುಟುಂಬ ಸಮೇತ ಬೀಚಿಗೆ ತೆರಳಿದ್ದರು. ಆಲ್ಲಿ ಅವರ ಕುಟುಂಬ ಕಡಲೆಕಾಯಿ ಮಾರುತ್ತಿದ್ದ ಅಜ್ಜಿಯೊಬ್ಬರಿಂದ ಕಡಲೆ ಖರೀದಿಸಿದ್ದರು.

 

ಕಡಲೆ ಖರೀದಿಸಿದ ಹಣವನ್ನು ನೀಡಲು ಪ್ರಣವ್ ತಂದೆ ಜೇಬಿಗೆ ಹಾಕಿದರು. ಆದರೆ ಅವರು ತಮ್ಮ ಪರ್ಸನ್ನು ಮನೆಯಲ್ಲೇ ಮರೆತುಬಂದಿದ್ದರು. ಹೀಗಾಗಿ ಆ ಅಜ್ಜಿಯ ಫೋಟೊ ಕ್ಲಿಕ್ಕಿಸಿ, ತಾವು ಹಣವನ್ನು ಮರಳಿಸುವುದಾಗಿ ಭರವಸೆ ನೀಡಿ ಅಲ್ಲಿಂದ ವಾಪಸ್ಸಾಗಿದ್ದರು.

 

ಇದಾದ ಸ್ವಲ್ಪ ಸಮಯದಲ್ಲೇ ಕುಟುಂಬ ಅಮೆರಿಕಕ್ಕೆ ವಾಪಸ್ಸಾಗಿತ್ತು. ಅಮೆರಿಕಕ್ಕೆ ವಾಪಸ್ಸಾದ ನಂತರ ಆ ಕುಟುಂಬಕ್ಕೆ ಕಡಲೆಕಾಯಿ ಅಜ್ಜಿಯ ಸಾಲ ಹಿಂದಿರುಗಿಸದೇ ಇದ್ದುದು ನೆನಪಾಗಿತ್ತು. 2010ರಲ್ಲಿ ಆಕುಟುಂಬ ಸದಸ್ಯರಾದ ಪ್ರಣವ್ ಗೆ 10 ವರ್ಷ, ಆತನ ತಂಗಿ ಸುಚಿತಾಗೆ ೯.

 

ಇದೀಗ ಅಜ್ಜಿಯ ಕಡಲೆಕಾಯಿ ಸಾಲವನ್ನು ತೀರಿಸುವ ಸಲುವಾಗಿಯೇ ಅಣ್ನ ತಂಗಿ ಇಬ್ಬರೂ ಭಾರತಕ್ಕೆ ಬಂದು ಕಾಕಿನಾಡಕ್ಕೆ ಬಂದು ಅಜ್ಜಿಯ ವಿಳಾಸವನ್ನು ಪತ್ತೆ ಹಚ್ಚಲು ಹರಸಾಹಸ ಪಟ್ಟಿದ್ದಾರೆ. ಕಡೆಗೂ ಅಜ್ಜಿಯನ್ನು ಪತ್ತೆ ಹಚ್ಚುವಲ್ಲಿ ಅವರಿಬ್ಬರೂ ಸಫಲರಾಗಿದ್ದಾರೆ. ಹಳ್ಳಿಯೊಂದರಲ್ಲಿ ವಾಸವಿದ್ದ ಕಡಲೆಕಾಯಿ ಅಜ್ಜಿಗೆ 25,000 ರೂ. ನೆರವನ್ನೂ ಅವರು ನೀಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ