Breaking News

ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ

Spread the love

ಮೈಸೂರು: ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ, ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಲು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಗಲಾಟೆ ಸಂಬಂಧ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ರಾಮನಗರ ಜಿಲ್ಲೆಗೂ ಸಚಿವ ಅಶ್ವತ್ಥ ನಾರಾಯಣ ಅವರಿಗೆ ಏನು ಗೊತ್ತು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೊತ್ತು ಹಾಗಾಗಿ ಅವರು ತಾಲ್ಲೂಕು ಕಚೇರಿ ಸೇರಿದಂತೆ ಹಲವು ಕಟ್ಟಡಗಳನ್ನು ನೀಡಿದ್ದಾರೆ. ಆದರೆ ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಬೇಕಿದೆ ಎಂದು ಹೇಳಿದರು.

ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅವರ ಮಾತಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬಾರದು, ಸಚಿವ ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ ಎಂದು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ

Spread the loveರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್​ 22ರಿಂದ ಸಾಮಾಜಿಕ, ಶೈಕ್ಷಣಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ