Breaking News

ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ

Spread the love

ಮೈಸೂರು: ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ, ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಲು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಗಲಾಟೆ ಸಂಬಂಧ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ರಾಮನಗರ ಜಿಲ್ಲೆಗೂ ಸಚಿವ ಅಶ್ವತ್ಥ ನಾರಾಯಣ ಅವರಿಗೆ ಏನು ಗೊತ್ತು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೊತ್ತು ಹಾಗಾಗಿ ಅವರು ತಾಲ್ಲೂಕು ಕಚೇರಿ ಸೇರಿದಂತೆ ಹಲವು ಕಟ್ಟಡಗಳನ್ನು ನೀಡಿದ್ದಾರೆ. ಆದರೆ ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಬೇಕಿದೆ ಎಂದು ಹೇಳಿದರು.

ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅವರ ಮಾತಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬಾರದು, ಸಚಿವ ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ ಎಂದು ಹೇಳಿದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ