Breaking News

ಬೆಳಗಾವಿಯಲ್ಲಿ ಮತಾಂತರ ಶಂಕೆ: ಪ್ರಾರ್ಥನೆ ವೇಳೆ ಮನೆಗೆ ನುಗ್ಗಿ ಹಲ್ಲೆ ಆರೋಪ

Spread the love

ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್‌ 29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಿಸಿ ಸಾಂಬಾರು ಎಸೆಯಲು ಯತ್ನ ಆರೋಪ

ಪ್ರಾರ್ಥನೆ ಮಾಡುತ್ತಿದ್ದ ವೇಳೆ 7 ಮಂದಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು, ಘಟಪ್ರಭ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬವರು ದೂರು ನೀಡಿದ್ದಾರೆ. ಜನರನ್ನು ಕ್ರೈಸ್ತ ಧರ್ಮಕ್ಕೆ ಏಕೆ ಮತಾಂತರ ಮಾಡಿಸುತ್ತಿದ್ದೀರಿ ಎಂದು ಪ್ರಶ್ನಿಸಿ ಹಲ್ಲೆ ಮಾಡಲಾಗಿದೆ. ಅಲ್ಲದೇ ಮಹಿಳೆ ಮೇಲೆ ಕಿಡಿಗೇಡಿಗಳು ಬಿಸಿ ಸಾಂಬಾರು ಎಸೆಯಲು ಯತ್ನಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತುಕ್ಕಾನಟ್ಟಿ ಗ್ರಾಮದ ಶಿವಾನಂದ ಗೋಟೂರು, ರಮೇಶ ದಂಡಾಪೂರ, ಪರಸಪ್ಪ ಬಾಬು, ಫಕ್ಕೀರಪ್ಪ ಬಾಗೇವಾಡಿ, ಕೃಷ್ಣ ಕಾನಿಟ್ಕರ್, ಕಂಕನವಾಡಿಯ ಚೇತನ ಗಡಾಡಿ, ಹತ್ತರಕಿ ಗ್ರಾಮದ ಮಹಾಂತೇಶ ಹತ್ತರಗಿ ವಿರುದ್ಧ ದೂರು ದಾಖಲಾಗಿದೆ. ಘಟನೆ ನಡೆದು ಎರಡು ದಿನ ಕಳೆದರೂ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನ ನಡೆದಿದೆ ಎಂದು ನೊಂದ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ