Breaking News

ವಿಶೇಷಚೇತನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ವಿಶೇಷಚೇತನರಿಗಾಗಿಯೇ ಬೃಹತ್ ಉದ್ಯೋಗ ಮೇಳ

Spread the love

ರಾಜ್ಯದಲ್ಲಿರುವ ಎಲ್ಲ ವಿಶೇಷಚೇತನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ವಿಶೇಷಚೇತನರಿಗಾಗಿಯೇ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಸಮರ್ಥನಂ ಸಂಸ್ಥೆ ಹಾಗೂ ಜೀತೂ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ 25ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ನೀಡಲು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವು. ಈ ವೇಳೆ ಬೆಳಗಾವಿ, ಬಾಗಲಕೋಟ, ಧಾರವಾಡ, ವಿಜಯಪುರ ಮೊದಲಾದ ಜಿಲ್ಲೆಗಳಿಂದ ವಿಶೇಷ ಚೇತನರು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದರು.ಇನ್ನು ಈ ಕಾರ್ಯಕ್ರಮ ಕುರಿತಂತೆ ಮಾತನಾಡಿದ ಸಮರ್ಥನಂ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮಹಾಂತೇಶ ಕಿವುಡಸಣ್ಣವರ್ ಮಾತನಾಡಿ, ಬೆಳಗಾವಿ ನಗರದಲ್ಲಿ ವಿಶೇಷ ಚೇತನರಿಗೆ ಉದ್ಯೋಗ ಸಿಗಲಿ ಎನ್ನುವ ಉದ್ದೇಶದಿಂದ ಸಮರ್ಥನಂ ಸಂಸ್ಥೆ ಹಾಗೂ ಜೀತೂ ಸಂಸ್ಥೆಗಳ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಈ ಉದ್ಯೋಗ ಮೇಳದಲ್ಲಿ 25ಕ್ಕೂ ಅಧಿಕ ಕಂಪನಿಗಳು ಉದ್ಯೋಗ ನೀಡಲು ಮುಂದೆಬಂದಿವೆ. ಇನ್ನು ಹಲವು ಜಿಲ್ಲೆಗಳ ಉದ್ಯೋಗಾಕಾಂಕ್ಷಿ ವಿಶೇಷ ಚೇತರೂ ಕೂಡ ಭಾಗಿಯಾಗಿದ್ದಾರೆ ಎಂದರು.

ಇನ್ನು ನಗರದಲ್ಲಿ ವಿಶೇಷ ಚೇತನರಿಗಾಗಿ ಹಮ್ಮಿಕೊಂಡಿದ್ದ ಈ ಉದ್ಯೋಗ ಮೇಳಕ್ಕೆ ಎಲ್ಲರಿಂದ ಶ್ಲ್ಯಾಘನೆ ವ್ಯಕ್ತವಾಯಿತು. ವಿಶೇಷ ಚೇತನರೂ ಕೂಡ ಈ ಮೂಲಕ ಮುಖ್ಯವಾಹಿನಿಗೆ ಬಂದು ಸ್ವತಂತ್ರ ಜೀವನ ನಡೆಸುವಂತಾಗಲಿ ಎನ್ನುವುದೇ ಎಲ್ಲರ ಆಶಯ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ