Breaking News
Home / ರಾಜಕೀಯ / ಜೀವಂತವಾಗಿ ವಾಪಾಸ್‌ ಬಂದಿದ್ದೇನೆ, ನಿಮ್ಮ ಸಿಎಂಗೆ ನನ್ನ ಧನ್ಯವಾದ ತಿಳಿಸಿಬಿಡಿ : ಅಧಿಕಾರಿಗಳ ಬಳಿ ʼಪ್ರಧಾನಿ ಮೋದಿʼ ಅಸಮಾಧಾನ

ಜೀವಂತವಾಗಿ ವಾಪಾಸ್‌ ಬಂದಿದ್ದೇನೆ, ನಿಮ್ಮ ಸಿಎಂಗೆ ನನ್ನ ಧನ್ಯವಾದ ತಿಳಿಸಿಬಿಡಿ : ಅಧಿಕಾರಿಗಳ ಬಳಿ ʼಪ್ರಧಾನಿ ಮೋದಿʼ ಅಸಮಾಧಾನ

Spread the love

ಚಂಡೀಗಢ: ಪ್ರಧಾನ ಮಂತ್ರಿಗಳ ಭದ್ರತೆಯಲ್ಲಿ ದೊಡ್ಡ ಲೋಪ ಉಂಟಾದ ಹಿನ್ನೆಲೆಯಲ್ಲಿ ಪಂಚಾಬ್‌ನ ಫಿರೋಜ್ ಪುರ(Ferozepur)ದಲ್ಲಿ ಬುಧವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರ ಮೊದಲ ರ್ಯಾಲಿ(first rally)ಯನ್ನ ರದ್ದುಗೊಳಿಸಲಾಗಿದ್ದು, ಪ್ರಧಾನಿ ನವದೆಹಲಿಗೆ ವಾಪಸ್‌ ಆಗಿದ್ದಾರೆ.

 

ಇನ್ನು ದೆಹಲಿಗೆ ವಾಪಸಾಗುವಾಗ ಭಟಿಂಡಾ ಸೆಕ್ಯೂರಿಟಿ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ, ‘ಏರ್‌ಪೋರ್ಟ್‌ವರೆಗೆ ಜೀವಂತವಾಗಿ ವಾಪಸ್‌ ಬಂದಿದ್ದೇನೆ. ನಿಮ್ಮ ಸಿಎಂಗೆ ನನ್ನ ಧನ್ಯವಾದ ತಿಳಿಸಿಬಿಡಿ’ ಎಂದಿದ್ದಾರೆ ಎನ್ನಲಾಗ್ತಿದೆ.

ಈ ನಡುವೆ ಭದ್ರತಾ ಲೋಪದ ಕುರಿತು ಮಾತನಾಡಲು ಪಂಜಾಪ್‌ ಮುಖ್ಯಮಂತ್ರಿಗಳಿಗೆ ಫೋನ್‌ ಮಾಡಿದ್ರೆ, ಕರೆಯನ್ನೇ ಸ್ವೀಕರಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ