ಬೆಂಗಳೂರು: ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.
ಕೆಎಸ್ಆರ್ ಬೆಂಗಳೂರು- ಧಾರವಾಡ ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು, ಧಾರವಾಡ – ಕೆಎಸ್ಆರ್ ಬೆಂಗಳೂರು ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು ಮತ್ತು ಹೊಸಪೇಟೆ-ಕೆಎಸ್ಆರ್ ಬೆಂಗಳೂರು ವಿಶೇಷ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ.
ವಾಸ್ಕೋಡಗಾಮ-ಯಶವಂತಪುರ ಎಕ್ಸ್ಪ್ರೆಸ್, ಮೈಸೂರು – ಬೆಳಗಾವಿ ಎಕ್ಸ್ಪ್ರೆಸ್ ರೈಲು ಸಂಚಾರ ಪುನಃ ಆರಂಭವಾಗುತ್ತಿದೆ. ಬೆಳಗಾವಿ ಶೇಡಬಾಳ ನಡುವೆ ಸಂಚಾರ ನಡೆಸುವ ವಿಶೇಷ ರೈಲಿನ ಸಂಚಾರ ಜ.7 (ಇಂದಿನಿಂದ) ರದ್ದಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.