ಬೆಳಗಾವಿ: ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದ್ದು ಭಕ್ತರು ಹಾಕಿದ ಕಾಣಿಕೆಯಿಂದ 1.18 ಕೋಟಿ ರು. ಹಣ ಸಂಗ್ರಹವಾಗಿದೆ. ಅಲ್ಲದೇ, 17.39 ಲಕ್ಷ ರೂ. ಮೌಲ್ಯದ ಚಿನ್ನವನ್ನು ದೇವಿಗೆ ಸಮರ್ಪಿಸಿದ್ದಾರೆ.
ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮಾತನಾಡಿ, ‘ಈ ಬಾರಿ ಹುಂಡಿಯಲ್ಲಿ ದಾಖಲೆ ಮೊತ್ತ ಸಂಗ್ರಹವಾಗಿದೆ. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಭಕ್ತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಾಗುವುದು’ ಎಂದು ತಿಳಿಸಿದ್ದಾರೆ.
ಹುಂಡಿ ಎಣಿಕೆ ವೇಳೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಸದಸ್ಯರಾದ ಪುಂಡಲೀಕ ಮೇಟಿ, ಕೊಳ್ಳಪ್ಪಗೌಡ ಗಂದಿಗವಾಡ, ವೈ.ವೈ.ಕಾಳಪ್ಪನವರ್, ಎಂಜಿನಿಯರ್ ಎ.ವಿ.ಮೂಳ್ಳೂರ್, ಅಧೀಕ್ಷಕ ಬಾಳೇಶ ಅಬ್ಬಾಯಿ, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅರವಿಂದ್ ಮಳಗೆ, ನಾಗರತ್ನಾ ಚೋಳಿನ, ಎಂ.ಎಸ್.ಯಲಿಗಾರ್, ಎಂ.ಪಿ.ದ್ಯಾಮನಗೌಡ್ರ, ಪ್ರಕಾಶ ಪ್ರಭುನವರ್, ವಿ.ಪಿ.ಸೊನ್ನದ, ಪ್ರಭು ಹಂಜಗಿ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿ ಇದ್ದರು.