Breaking News

ಗೋಕಾಕ್​​​ ತಾಲೂಕಿನ ಘಟಪ್ರಭದಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಎರಗಿರುವ ನಾಯಿ

Spread the love

ಬೆಳಗಾವಿ : ಮೂವರು ಮಕ್ಕಳು ಸೇರಿ ಐವರನ್ನು ಕಚ್ಚಿ ಗಾಯಗೊಳಿಸಿದ ಶ್ವಾನವನ್ನೇ ಸ್ಥಳೀಯರು ಹತ್ಯೆಗೈದಿರುವ ಘಟನೆ ಜಿಲ್ಲೆಯ ಗೋಕಾಕ್​​​ ತಾಲೂಕಿನ ಘಟಪ್ರಭದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಎರಗಿರುವ ನಾಯಿ ತಲೆ, ಕಣ್ಣಿಗೆ ಮನಬಂದಂತೆ ಕಚ್ಚಿದೆ. ಬಳಿಕ ಸ್ಥಳೀಯರ ಮೇಲೂ ನಾಯಿ ದಾಳಿ ಮಾಡಿದೆ. ಕಾಲು, ಕೈ ಗಂಭೀರವಾಗಿ ಕಚ್ಚಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಜಮಾವಣೆಗೊಂಡ ಸ್ಥಳೀಯರು ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ.

ಗಾಯಗೊಂಡ ಮಕ್ಕಳು ಹಾಗೂ ವಯಸ್ಕರರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ