Breaking News

ಬೆಳಗಾವಿ: ನಿರ್ಜನ ಪ್ರದೇಶದ ಪಾಳುಮನೆಯೊಂದರಲ್ಲಿ ತಲೆ ಛಿದ್ರಗೊಂಡಿದ್ದ ಶವ ಪತ್ತೆ

Spread the love

ಬೆಳಗಾವಿ: ನಿರ್ಜನ ಪ್ರದೇಶದ ಪಾಳುಮನೆಯೊಂದರಲ್ಲಿ ತಲೆ ಛಿದ್ರಗೊಂಡಿದ್ದ ಶವ ಪತ್ತೆಯಾಗಿದೆ. ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪ್ರಕರಣ ಇದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಇರುವ ಪಾಳು ಬಿದ್ದಿರುವ ಮನೆಯಲ್ಲಿ ಶವವೊಂದು ಪತ್ತೆಯಾಗಿದ್ದು, ತಲೆ ಬಹುತೇಕ ಛಿದ್ರಗೊಂಡಿದೆ.

ಆಟೋ ಚಾಲಕ ನೂಹಾನ್​ ಧಾರವಾಡಕರ್​ (23) ಎಂಬಾತ ಕೊಲೆಗೀಡಾದವ ಎಂಬುದು ಪತ್ತೆಯಾಗಿದೆ.

ಈತ ಕಳೆದ ಐದು ದಿನಗಳ ಹಿಂದೆ ಮನೆಯಿಂದ ಹೊರಹೋಗಿದ್ದು, ನಾಲ್ಕು ದಿನಗಳ ಹಿಂದೆ ಕೊಲೆಯಾಗಿ ಹೋಗಿದ್ದಾನೆ. \ ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಹಾಗೂ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ