Breaking News

ಹುಬ್ಬಳ್ಳಿಯಲ್ಲಿ ಪತಿ ನಡೆಸುತ್ತಿದ್ದ ಲಾಡ್ಜ್​ನಲ್ಲೇ ಮಹಿಳಾ ಪರಿಸರ ಅಭಿಯಂತರ ಅಧಿಕಾರಿ ಆತ್ಮಹತ್ಯೆ!

Spread the love

ಹುಬ್ಬಳ್ಳಿ: ಸರ್ಕಾರಿ ಅಧಿಕಾರಿಯೊಬ್ಬಳು ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಮೈಸೂರು ಮೂಲದ ಶಾಂತಲಾ ಸುಪ್ರೀತ ಬೆಳಗಾವಿ ಮೃತರು.

ಶಾಂತಲಾ ನೆಲಮಂಗಲದ ಪರಿಸರ ಅಭಿಯಂತರರಾಗಿದ್ದರು. ಇವರು ಭಾನುವಾರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್​ನಲ್ಲಿ ಏನಿದೆ ಎಂಬುದು ತಿಳಿದುಬಂದಿಲ್ಲ. ಮೃತ ಅಧಿಕಾರಿ ತೀವ್ರವಾದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗ್ತಿದೆ.

ಅಲ್ಲದೇ, ಅಕ್ಟೋಬರ್​ನಲ್ಲಿ ಇವರ ಮಗಳು ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಶಾಂತಲಾ ಕೂಡಾ ತಮ್ಮ ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಈ ಕುರಿತು ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ