Breaking News

ಹಾವು ಕಚ್ಚಿ ವಿದ್ಯಾರ್ಥಿ ಸಾವು

Spread the love

ಮೈಸೂರು: ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ವಿಶ್ವಚೇತನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅಬ್ರಾರ್ ಪಾಷ ಎಂಬಾತನೇ ಹಾವು ಕಚ್ಚಿ ಸಾವನ್ನಪ್ಪಿದ ವಿದ್ಯಾರ್ಥಿ.

 

ಭಾನುವಾರ ರಜೆಯಿದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಕೊಳ್ಳೇಗಾಲದಿಂದ ತಲಕಾಡಿಗೆ ಬಂದಿದ್ದನು. ಇಲ್ಲಿನ ಕಾವೇರಿ ನದಿ ಮತ್ತು ಮರಳಿನಲ್ಲಿ ಓಡಾಡುತ್ತಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಾ ಸುತ್ತಮುತ್ತ ಓಡಾಡುತ್ತಿದ್ದ ವೇಳೆ ಬದಿಯಲ್ಲಿದ್ದ ಹಾವು ಕಚ್ಚಿದೆ ಪರಿಣಾಮ ಸಾವನ್ನಪ್ಪಿದ್ದಾನೆ. ಈ ಸಂಬಂಧ ತಲಕಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ