Breaking News

ನಾಳೆಯಿಂದ 1 ರಿಂದ 8ನೇ ತರಗತಿಗೆ ರಜೆ ಘೋಷಿಸಿ, ಧಾರವಾಡ ಜಿಲ್ಲಾಧಿಕಾರಿ ಆದೇಶ

Spread the love

ಧಾರವಾಡ: ಜಿಲ್ಲೆಯಲ್ಲಿ ದಿನೇ ದಿನೇ ಮಕ್ಕಳಿಗೂ ಕೊರೋನಾ ಸೋಂಕು ತುಗುಲಿತ್ತಿರೋ ಕಾರಣ, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದಂತ ತಾಲೂಕಿನ 1 ರಿಂದ 8ನೇ ತರಗತಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶಿಸಿದ್ದಾರೆ.

 

ಈ ಬಗ್ಗೆ ಆದೇಶ ಹೊರಡಿಸಿರುವಂತ ಅವರು, ಜಿಲ್ಲೆಯಲ್ಲಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಂತ ಶಾಲೆಗಳ ತಾಲೂಕಿನಲ್ಲಿ 1 ರಿಂದ 8ನೇ ತರಗತಿಯವರೆಗೆ ನಾಳೆಯಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಣೆ ಮಾಡಿ ಆದೇಶಿಸಿದ್ದಾರೆ.

ಇನ್ನೂ 1 ರಿಂದ 8ನೇ ತರಗತಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದ್ದು, ಇತರೆ ತರಗತಿಗಳು ಎಂದಿನಂತೆ ನಡೆಯಲಿವೆ. 9, 10 ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಇಲ್ಲ. ಈ ಆದೇಶ ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ