Breaking News

ಮೇಲ್ಮನೆ ರಾಜಕೀಯ ಪುನರ್ವಸತಿ ಕೇಂದ್ರವಾಗುತ್ತಿರುವುದು ದುರದೃಷ್ಟಕರ: ಬಸವರಾಜ ಹೊರಟ್ಟಿ

Spread the love

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಪರಿಷತ್, ರಾಜಕೀಯ ಪುನರ್ವಸತಿ ಕೇಂದ್ರದಂತಾಗುತ್ತಿರುವುದು ದುರದೃಷ್ಟಕರ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 114 ವರ್ಷ ಇತಿಹಾಸವಿರುವ ಪರಿಷತ್‍ಗೆ ತನ್ನದೇ ಆದ ಘನತೆಯಿದೆ. ಅದಕ್ಕೆ ಚ್ಯುತಿಯಾಗದಂತೆ ಉಳಿಸಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಕಿರಿಯ ವಯಸ್ಸಿನವರೇ ಹೆಚ್ಚಾಗಿ ಆರಿಸಿ ಬಂದಿದ್ದು, ಸೂಕ್ತ ತರಬೇತಿ, ಮಾಹಿತಿ ನೀಡಲು ಕ್ರಮ ವಹಿಸಲಾಗುತ್ತಿದೆ. ಪರಿಷತ್‍ಗೆ ಸಾಧ್ಯವಾದಷ್ಟು ಪ್ರಬುದ್ಧರಿಗೆ ಆದ್ಯತೆ ನೀಡುವಂತೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ