ಪಣಜಿ(ಗೋವಾ): ದೇಶದ ಅತಿ ಸಣ್ಣ ರಾಜ್ಯ ಗೋವಾ ವಿಧಾನಸಭೆಗೂ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಆಡಳಿತಾರೂಢ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ತನಗೆ ಟಿಕೆಟ್ ನೀಡದ ನಿರ್ಧಾರವನ್ನು ಪ್ರಶ್ನಿಸಿರುವ ಅವರು, ಪಕ್ಷವು ಪ್ರಶ್ನಾರ್ಹ, ಕಳಂಕಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡ್ತಿದೆ ಎಂದು ಆರೋಪಿಸಿದ್ದಾರೆ. ಪಣಜಿ ಕ್ಷೇತ್ರದಿಂದ ಅತ್ಯಾಚಾರಿಗಳು, ಕ್ರಿಮಿನಲ್ಗಳಿಗೆ ಟಿಕೆಟ್ ನೀಡಬಹುದಾಗಿದೆ, ಆದರೆ ನನ್ನಂತಹ ಶುದ್ಧ ವ್ಯಕ್ತಿಗೆ ಏಕೆ ಟಿಕೆಟ್ ನೀಡುತ್ತಿಲ್ಲ? ಎಂದು ಕೋಪಗೊಂಡಿದ್ದಾರೆ.