Breaking News

ಉಸಿರುಗಟ್ಟಿ ಸಾವಿಗೀಡಾದರು ಏಳು ವರ್ಷದ ಮಗಳು ಮತ್ತು ತಾಯಿ

Spread the love

ಬೆಂಗಳೂರು: ಸ್ನಾನಕ್ಕೆಂದು ಹೋಗಿದ್ದ ತಾಯಿ-ಮಗಳು ಉಸಿರುಗಟ್ಟಿ ಸಾವಿಗೀಡಾದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

ತಾಯಿ ಮಂಗಳ (35), ಪುತ್ರಿ ಗೌತಮಿ (07) ಸಾವಿಗೀಡಾದವರು.

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ನಡೆದುಹೋಗಿದೆ. ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು.

 

ಇಂದು ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು ಕರೆದುಕೊಂಡು ತಾಯಿ ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿದ್ದರು. ಅಲ್ಲಿ ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಆನ್ ಮಾಡಲಾಗಿತ್ತು.

 

ಆದರೆ ಗ್ಯಾಸ್ ಗೀಸರ್​ನಿಂದ ಅನಿಲ ಸೋರಿಕೆ ಉಂಟಾಗಿದ್ದು, ಅದರಿಂದ ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸಾವಿಗೀಡಾಗಿದ್ದಾರೆ. ಮಾಲೀಕರ ಮನೆಯ ಮಹಿಳೆ ಮನೆ ಬಳಿ ಬಂದಾಗ ಇದು ಗಮನಕ್ಕೆ ಬಂದಿತ್ತು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ