Breaking News

ಸಿಗುತ್ತಿಲ್ಲ ಕೋವಿಡ್ ಪರಿಹಾರ!; ಪಾಸಿಟಿವ್ ಬಂದರೂ ಎಸ್​ಆರ್​ಎಫ್ ಐಡಿ ಸಿಗದೆ ಪರದಾಟ

Spread the love

ಕರೊನಾ ಪಾಸಿಟಿವ್ ಬಂದವರ ಎಸ್​ಆರ್​ಎಫ್ ಐಡಿ ರಚನೆಯಾಗದ ಪರಿಣಾಮ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಸಿಗದಂತಾಗಿದೆ. ಹಲವು ತಿಂಗಳಿಂದ ಪರಿಹಾರಕ್ಕಾಗಿ ಕುಟುಂಬಗಳು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಬಾಗಿಲು ಬಡಿಯುತ್ತಿದ್ದರೂ ಇತ್ಯರ್ಥ ಕಾಣುತ್ತಿಲ್ಲ.

ಮೊದಲ ಮತ್ತು ಎರಡನೇ ಅಲೆ ಮುಗಿದು ಮೂರನೇ ಅಲೆ ಕಾಲಿಟ್ಟಿದ್ದರೂ ತಾಂತ್ರಿಕ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ನಡೆಯಿಂದ ಬೇಸತ್ತಿರುವ ರಾಜ್ಯದ 1550 ಕುಟುಂಬಗಳು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿವೆ.

ಎರಡನೇ ಅಲೆ ವೇಳೆ ಕೋವಿಡ್​ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ. ಮತ್ತು ಎಪಿಎಲ್ ಕುಟುಂಬಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ವಾಗ್ದಾನ ಮಾಡಲಾಗಿತ್ತು. ಅದರಂತೆ ಪರಿಹಾರ ವಿತರಣೆ ಕಾರ್ಯವೂ ನಡೆದಿದೆ. ಆದರೆ, ಹಲವರದ್ದು ಆರ್​ಟಿಪಿಸಿಆರ್​ನಲ್ಲಿ ಕೋವಿಡ್ ಪಾಸಿಟಿವ್ ಬಂದರೆ, ಕೆಲವರದ್ದು ರ್ಯಾಟ್​ನಲ್ಲಿ ಪಾಸಿಟಿವ್ ಬಂದಿತ್ತು. ಇನ್ನೂ ಕೆಲವರದು ಎರಡೂ ಪರೀಕ್ಷೆಗಳಲ್ಲಿ ಪಾಸಿಟಿವ್ ಬಂದಿಲ್ಲ. ಇಂಥವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದು ವೈದ್ಯರಿಗೆ ಸವಾಲಾಗಿತ್ತು. ಈ ವೇಳೆ ಸ್ಕ್ಯಾನಿಂಗ್ ಮಾಡಿಸಿದಾಗ ಸೋಂಕಿರುವುದು ದೃಢಪಟ್ಟಿತ್ತು.

ಯಾಕೆ ನೀಡಲಾಗುತ್ತಿಲ್ಲ?: ಆಸ್ಪತ್ರೆಗಳು ವ್ಯಕ್ತಿಯ ಡೆತ್ ಸಮ್ಮರಿಯಲ್ಲಿ ರ್ಯಾಟ್, ಆರ್​ಟಿಪಿಸಿಆರ್​ನಲ್ಲಿ ಕರೊನಾ ನೆಗಟಿವ್ ಬಂದಿದ್ದರೂ ಸ್ಕಾಯನಿಂಗ್​ನಲ್ಲಿ ಪಾಸಿಟಿವ್ ಬಂದಿದೆ ಎಂದು ವಿವರವಾಗಿ ಬರೆದಿದ್ದಾರೆ. ಅರ್ಹ ಕುಟುಂಬಗಳು ಪರಿಹಾರಕ್ಕಾಗಿ ರಾಜ್ಯದ 31 ಜಿಲ್ಲೆ ವ್ಯಾಪ್ತಿಯ ಆರೋಗ್ಯ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಗೆ ಸಲ್ಲಿಸಿದರೂ ಪರಿಗಣನೆಯಾಗುತ್ತಿಲ್ಲ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ