ಹುಕ್ಕೇರಿ : ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, 54 ಪಂಚಾಯಿತಿಗಳಿಗೆ ಕಸ ವಿಲೇಮಾರಿ ವಾಹನ ನೀಡಲಾಗುತ್ತಿದೆ. ಇದನ್ನ ಹುಕ್ಕೇರಿ ತಾಲೂಕಿನ ಜನ ಸದುಪಯೋಗ ಪಡಿಸಿಕೊಳ್ಳಬೇಕು. ಹುಕ್ಕೇರಿ ತಾಲೂಕು ಸ್ವಚ್ಛ ತಾಲೂಕು ಮಾಡಲು ಸಾರ್ವಜನಿಕರು ಸಹಕರಿಸಿದರೆ ಹುಕ್ಕೇರಿ ತಾಲೂಕು ನಂದನವನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಸ ವಿಲೇವಾರಿ ವಾಹನಗಳಿಗೆ ಸಚಿವ ಉಮೇಶ್ ಕತ್ತಿ ಚಾಲನೆ
ಪ್ರತಿ ಕಸವಿಲೆವಾರಿ ವಾಹನಗಳು ಮಹಿಳಾ ಸ್ವ ಸಹಾಯ ಸಂಘದವರ ಅಡಿ ಕಾರ್ಯನಿರ್ವಹಿಸಲಿದ್ದು, ಮಹಿಳಾ ಸ್ವಸಹಾಯ ಸಂಘದಿಂದ ವಾಹನ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಜೆ.ಜೆ.ಎಂ ಯೋಜನೆ ಅಡಿ ಹುಕ್ಕೇರಿ ತಾಲೂಕಿನ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ಜಾರಿಯಲ್ಲಿದೆ. ಶೀಘ್ರದಲ್ಲಿ ಹುಕ್ಕೇರಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ 24 ಗಂಟೆ ಕುಡಿಯುವ ನೀರು ದೊರೆಯಲಿದೆ. ಜನರಿಗೆ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವುದು ನಮ್ಮ ಗುರಿ ಇದೆ ಎಂದರು.