Breaking News

ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ ಸಂಬಳ ಕೊಡುತ್ತೀನಿ.: ಹೆಚ್​.ಡಿ.ರೇವಣ್ಣ

Spread the love

ಬೆಂಗಳೂರು: ಖಾಸಗಿ ಕಾಲೇಜಿಗೆ ಅನುಮತಿ ಕೊಡಲು ಸಚಿವರಿಗೆ ಆಗುತ್ತದೆ. ಆದರೆ ಸರ್ಕಾರಿ ಕಾಲೇಜಿಗೆ ಅಲ್ಲ. ಕೆಲವರಿಗೆ 300-400 ಕೋಟಿ ರೂ. ನಿಯಮ ಮೀರಿ ಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಹಣ ಎಲ್ಲಿ ಕೊಟ್ಟಿದ್ದಾರೆ ಅಂತ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಹೊಳೆನರಸೀಪುರ ಕಾಲೇಜಿಗೆ 2 ಸ್ನಾತಕೋತ್ತರ ಕೋರ್ಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹೆಚ್​.ಡಿ. ಕುಮಾರಸ್ವಾಮಿ ನೀಡಿದ್ದನ್ನು ಅಶ್ವತ್ಥ್ ನಾರಾಯಣ ರದ್ದು ಮಾಡಿದ್ದಾರೆ. ಅಂದರೆ ನಮಗೆ ಕೊಟ್ಟ ಎಲ್ಲ ಅನುದಾನ ಬಿಜೆಪಿ ಸರ್ಕಾರ ತಡೆ ಹಿಡಿದಿದೆ. ಬಡವರ ಮಕ್ಕಳು ಓದುವ ಕಾಲೇಜಿಗೆ ಯಾಕೆ ರಾಜಕೀಯ? ಉದ್ದೇಶಪೂರ್ವಕವಾಗಿ ಯಾಕೆ ಇದನ್ನು ಸಚಿವರು ತಿರಸ್ಕರಿಸಿದ್ದಾರೆ.

ಸರ್ಕಾರ ಪಾಪರ್ ಬಿದ್ದಿದ್ದರೆ ನಾನೇ ಟೀಚರ್​​ಗೆ ಸಂಬಳ ಕೊಡುತ್ತೀನಿ. ಬೇಕಿದ್ದರೆ ಛಾಪಾ ಕಾಗದದ ಮೇಲೆ ಬರೆದುಕೊಡಲು ಸಿದ್ಧ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ