Breaking News

ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿ

Spread the love

ಬೆಂಗಳೂರು : ಸಚಿವ ಸಂಪುಟ ಕುರಿತಾದ ಕೂಗು ಜೋರಾಗಿರುವ ವೇಳೆಯಲ್ಲಿ ಬಿಜೆಪಿ ಶಾಸಕರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಮತ್ತು ಎಂ.ಪಿ. ರೇಣುಕಾಚಾರ್ಯ ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿರುವುದು ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ.

ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು.

 

ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು, ಕೇಂದ್ರ ಸಚಿವರಾಗಿದ್ದರು, ಹಿರಿಯರು. ನಮ್ಮದು ಆಕಸ್ಮಿಕ ಸೌಜನ್ಯದ ಭೇಟಿ ಎಂದರು.

ಮುಂದೆ ಬಿಜೆಪಿ ಅಧಿಕಾರಕ್ಕೆ ಬರಬೇಕು.ಪಾದಯಾತ್ರೆಯ ಮೂಲಕ ಅಧಿಕಾರಕ್ಕೆ ಬಂದೇವು ಅನ್ನುವ ಹಾಗೆ ಡಿ ಕೆ ಶಿವಕುಮಾರ್ ಇದ್ದಾರೆ. ಹೀಗಾಗಿ ಅವರ ವೇಗ ತಡೆಯಲು ಚರ್ಚೆ ನಡೆಸಿದೆವು ಎಂದರು.

ಕಾಲ ಬಂದರೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇವೆ. ಮಾರ್ಚ್ ಆದ ಮೇಲೆ ಮಂತ್ರಿಗಿರಿ ಕೊಟ್ಟರೆ ಅಭಿವೃದ್ಧಿ ಆಗುತ್ತದಾ.ಯತ್ನಾಳ್ ಹಿರಿಯರಿದ್ದಾರೆ, ಅವರು ಮಂತ್ರಿಯಾಗಲಿ ಅಂತ ಶುಭಕೋರುತ್ತೇನೆ ಎಂದರು.


Spread the love

About Laxminews 24x7

Check Also

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

Spread the loveಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ