Breaking News

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

Spread the love

ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

 

ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್‌ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ.

1.50 ಕೆ.ಜಿ. ಸೋಡಿಯಂ ನೈಟ್ರೇಟ್, 50 ಕೆ.ಜಿ. ಚಾರಕೋಲ್ ಪೌಡರ್ ಸೇರಿದಂತೆ 250 ಕೆ.ಜಿ. ಲಘು ಸ್ಪೋಟಕ ವಸ್ತುಗಳು, 250 ಕೆ.ಜಿ. ಕಚ್ಚಾ ಸ್ಪೋಟಕ ವಸ್ತುಗಳಾದ ಗಂಧಕ, ಸಲ್ಪರ್ ಮುಂತಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ