Breaking News

ಇಂದು ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ, ಮಧ್ಯಾಹ್ನದ ವೇಳೆ ಹೊಸ ರೂಲ್ಸ್ ಸಾಧ್ಯತೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.

ಇಂದು ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ, ಮಧ್ಯಾಹ್ನದ ವೇಳೆ ಹೊಸ ರೂಲ್ಸ್ ಸಾಧ್ಯತೆ

ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ.

ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು ಭಯಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವರು ಹೇಳಿದ್ದಾರೆ. ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲವೆಂದು ಹೇಳಲಾಗಿದ್ದು, ಸಿಎಂ ನಡೆಸುವ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ