Breaking News
Home / ಜಿಲ್ಲೆ / ದಕ್ಷಿಣ ಕನ್ನಡ / ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

Spread the love

ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಸರಗೋಡು ಬಿಜೆಪಿ ಕಾರ್ಯಕರ್ತರು ಹಾಗೂ ಕೇರಳ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರು ಬ್ಯಾರಿಕೇಡ್ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಗಡಿ ಸಂಪೂರ್ಣ ತೆರೆದಿದ್ದು, ಕೇರಳದಿಂದ ಮಂಗಳೂರಿಗೆ ಪ್ರವೇಶಿಸಲು ಅನುಮತಿ ಇದೆ. ಆದರೆ ಕೇರಳಕ್ಕೆ ಪ್ರವೇಶಿಸಲು ಪೊಲೀಸರು ತಡೆಯೊಡ್ಡುತ್ತಿದ್ದಾರೆ. ಕೇರಳ ಸರ್ಕಾರ ತಕ್ಷಣ ಎಲ್ಲಾ ಗಡಿಯನ್ನು ತೆರೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.


Spread the love

About Laxminews 24x7

Check Also

ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

Spread the loveಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ