ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಶುಕ್ರವಾರ ಘೋಷಿಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯದ ಕುರಿತು ರಾಜ್ಯದ ಜನತೆ ನಿರ್ಧರಿಸಲಿದ್ದಾರೆ.
ಕೇವಲ ಮನೋಹರ್ ಪರ್ರಿಕರ್ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಲು ನಾನು ಪಣಜಿ ಕ್ಷೇತ್ರದಿಂದ ಸ್ಫರ್ಧಿಸುತ್ತಿದ್ದೇನೆ ಎಂದರು.
ಪಣಜಿ ಕ್ಷೇತ್ರದ ಹಾಲಿ ಬಿಜೆಪಿಯ ಉಮೇದುವಾರರ ಬಗ್ಗೆ ಮಾತನಾಡುವುದು ಕೂಡ ನಾಚಿಕೆಗೇಡಿನ ಸಂಗತಿ. ನನಗೆ ಬೇರೆ ಪಕ್ಷಗಳಿಗೆ ಹೋಗುವ ಯೋಚನೆಯೂ ಇಲ್ಲ ಎಂದರು.
ನನಗೆ ಹಲವು ರಾಜಕೀಯ ಪಕ್ಷಗಳು ಆಫರ್ ನೀಡಿವೆ. ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ತಂದೆಯವರೊಂದಿಗೆ ಕೆಲಸ ಮಾಡಿದವರಿಗಾಗಿ ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಫರ್ಧಿಸುತ್ತಿದ್ದೇನೆ.