Breaking News

‘ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ’ – ಸಚಿವ ನಾಗೇಶ್

Spread the love

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.

ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.

ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ*

Spread the loveಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ* ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ