ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ನಾವು ಯಾವುದೇ ಸರ್ಪೈಸ್ ಘೋಷಣೆ ಮಾಡುವುದಿಲ್ಲ. ಅಗತ್ಯಕ್ಕೆ ತಕ್ಕಂತೆ ಸ್ಪಂದಿಸುತ್ತಾ ಹೋಗುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಹೇಳಿಕೆಆರ್.ಟಿ. ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಪ್ರಕಾರ ಚರ್ಚೆ ನಡೆಯಲಿದೆ. ನಂತರ ಇತರ ವಿಷಯಗಳ ಚರ್ಚೆ ವೇಳೆ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡುತ್ತೇವೆ.