ಬೆಂಗಳೂರು: ಇತ್ತೀಚೆಗೆ ಸಾಕಷ್ಟು ಆರೋಪ ಹಾಗೂ ವಿವಾದಗಳಿಗೆ ಈಡಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಎಕ್ಸಿಕ್ಯೂಟಿವ್ ಸ್ಥಾನದಿಂದ ನಾನ್-ಎಕ್ಸಿಕ್ಯೂಟಿವ್ ಸ್ಥಾನಕ್ಕೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.
ಸಿಐಡಿಯಲ್ಲಿ ಅಧಿಕಾರಿಯಾಗಿದ್ದ ರವಿ ಚನ್ನಣ್ಣನವರ್ ಅವರನ್ನ ಸರ್ಕಾರ ನಿಗಮ ಮಂಡಳಿಗೆ ವರ್ಗಾವಣೆ ಮಾಡಿರೋದು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕೇವಲ ರವಿ ಚನ್ನಣ್ಣನವರ್ ಮಾತ್ರವಲ್ಲ, ಒಟ್ಟು ಒಂಬತ್ತು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ನೀಡಿದೆ. ಐಪಿಎಸ್ ರವಿ. ಡಿ. ಚೆನ್ನಣ್ಣನವರ್ ಅವರನ್ನು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ನೇಮಿಸಲಾಗಿದೆ. ಇನ್ನುಳಿದ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ್ ಗುಳೇದ್, ಅಬ್ದುಲ್ ಅಹ್ಮದ್, ಟಿ.ಶ್ರೀಧರ್, ಟಿ.ಪಿ.ಶಿವಕುಮಾರ್, ದಿವ್ಯಾಸಾರಾ ಥಾಮಸ್, ಡಿ. ಕಿಶೋರ್ ಬಾಬು, ಎ. ಗಿರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಯಾವ ಅಧಿಕಾರಿ ಎಲ್ಲಿಗೆ ವರ್ಗ?
- ರವಿ ಚನ್ನಣ್ಣನವರ್, ಸಿಐಡಿಯಿಂದ ವಾಲ್ಮಿಕಿ ಅಭಿವೃದ್ಧಿ ನಿಗಮ
- ಅಬ್ದುಲ್ ಅಹಾದ್ ಎಸಿಬಿ ಯಿಂದ ಕೆಎಸ್ಆರ್ಟಿಸಿ ವಿಜಿಲೆನ್ಸ್
- ಟಿ. ಶ್ರೀಧರ ಕೊಪ್ಪಳ ಎಸ್.ಪಿ ಯಿಂದ ಡಿಸಿಆರ್ಇ
- ದಿವ್ಯಸಾರ ಥಾಮಸ್, ಚಾಮರಾಜನಗರ ಎಸ್.ಪಿ ಯಿಂದ ಪೊಲೀಸ್ ಅಕಾಡೆಮಿಯ ಮೈಸೂರು ಡೆಪ್ಯೂಟಿ ಡೈರೆಕ್ಟರ್
- ಕಿಶೋರ್ ಬಾಬು, ಬೀದರ್ ಎಸ್ಪಿ ಯಾಗಿ ವರ್ಗಾವಣೆ
- ಅರುಣಗಂಶು ಗಿರಿ, ಎಸಿಬಿ ಯಿಂದ ಕೊಪ್ಪಳ ಎಸ್ಪಿಯಾಗಿ ವರ್ಗಾವಣೆ
- ಎಲ್.ನಾಗೇಶ್, ಬೀದರ್ ಎಸ್.ಪಿ ಯಿಂದ ಸಿಐಡಿ ಗೆ ವರ್ಗಾವಣೆ
- ಟಿ.ಪಿ ಶಿವಕುಮಾರ್, ಚಾಮರಾಜನಗರ ಎಸ್ಪಿಯಾಗಿ ನೇಮಕ
ವರ್ಗಾವಣೆ ಪತ್ರ ಇಲ್ಲಿದೆ: