ಬೆಂಗಳೂರು: ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಯಿಂದ, ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ಮೂವರು ಪೆಡ್ಲರ್ಸ್ನ್ನು ಅರೆಸ್ಟ್ ಮಾಡಲಾಗಿದೆ.
ಶಿವ ಪಾಟೀಲ್, ಸೋಮ ಸುಂದರಂ ಹಾಗೂ ಪೂಜಾ ಸಿಸಿಬಿ ಬಲೆಗೆ ಬಿದ್ದ ಪೆಡ್ಲರ್ಸ್.
ಆರೋಪಿತ ಕಾನ್ಸ್ಟೇಬಲ್ಗಳಿಗೆ ಇವರ ಸಂಪರ್ಕ ಇತ್ತು ಎನ್ನಲಾಗ್ತಿದ್ದು, ಕೇಸ್ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಸಾಕಷ್ಟು ವೇಗ ಪಡೆದುಕೊಂಡಿದೆ. ಆರೋಪಿಗಳು ಓರಿಸ್ಸಾದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.