Breaking News

ಡಿಕೆಎಸ್ ಜೊತೆ ಸಂಪರ್ಕ.. ಅವರು ಕಾಂಗ್ರೆಸ್​ಗೆ ಹೋಗಬಹುದು’ ಸವದಿ ಬಗ್ಗೆ ಲಖನ್ ಬಾಂಬ್

Spread the love

ಬೆಳಗಾವಿ: ಮುಂದೊಂದು ದಿನ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್​ಗೆ ಹೋದರೂ ಹೋಗಬಹುದು ಎಂದು ಪರಿಷತ್ ಸದಸ್ಯ ಲಖನ್ ಜಾರಕಿಹೊಳಿಗೆ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಈ ಬಗ್ಗೆ ಮಾತನಾಡಿ.. ಬೆಳಗಾವಿ ಜಿಲ್ಲೆಯಲ್ಲಿ ಸೋತ ನಾಯಕರು ಅಧಿಕಾರ ಅನುಭವಿಸಿದ್ರು.

ಅಥಣಿಯಲ್ಲಿ ಸೋತ ನಾಯಕರು ಉನ್ನತ ಹುದ್ದೆ ಪಡೆದರು. ಪರಿಷತ್ ಚುನಾವಣೆಯಲ್ಲಿ ಡಿಕೆಎಸ್ ಜೊತೆಗೆ ಸೇರಿ ಕುತಂತ್ರ ರೂಪಿಸಿದರು ಎಂದು ಆರೋಪಿಸಿದರು.

ಡಿಕೆಎಸ್ ಜೊತೆ ಸೇರಿ ಕುತಂತ್ರ
ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೊಟ್ಟರೆ ಜಿಲ್ಲೆಯಲ್ಲಿ ಅನುಕೂಲ ಆಗಲಿದೆ. ಒಬ್ಬರು ಅಥಣಿಯಿಂದ ಸೋತು ಡಿಸಿಎಂ ಆದರು. ಈಗ ಅವರೇ ಕುಳಿತು ಕುತಂತ್ರ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸೇರಿಕೊಂಡು ಕವಟಗಿಮಠ ಸೋಲಿಸಿದ್ರು. ಮತ್ತೆ ಅವರೇ ಪ್ರತ್ಯೇಕ ಸಭೆಯನ್ನೂ ಸಹ ಮಾಡಿದ್ದಾರೆ. ಸೋಲಲು ಕಾರಣರಾದವರಿಗೆ ಉನ್ನತ ಹುದ್ದೆ ನೀಡಲಾಗುತ್ತಿದೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ನನ್ನ ಪರವಾಗಿ ಮಾಡಿದ್ರೆ, ನಾನು ಮೊದಲ ಸುತ್ತಿನಲ್ಲಿ ಆಯ್ಕೆಯಾಗುತ್ತಿದ್ದೆ. ಬಿಜೆಪಿ ಸೋಲಿಗೆ ಅಥಣಿ ನಾಯಕರೇ ನೇರ ಕಾರಣ. ಡಿಕೆಎಸ್​ ಜತೆಗೂ ಹಾಗೂ ಬಿಜೆಪಿ ಜತೆಗೂ ಸಂಪರ್ಕದಲ್ಲಿದ್ದಾರೆ. ಮುಂದೆ ಕಾಂಗ್ರೆಸ್​ಗೆ ಹೋದರೂ ಹೋಗಬಹುದು ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ