Breaking News

ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.

Spread the love

ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.

 

ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಪ್ರತಿ ತಾಲ್ಲೂಕು ಮಟ್ಟದಲ್ಲೂ ಗೋಶಾಲೆಗಳನ್ನು ತೆರೆಯಲಾಗಿದ್ದು, ಒಟ್ಟು 197 ಗೋಶಾಲೆಗಳಿಗೆ ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ. ಜಿಲ್ಲೆ ಹಾಗೂ ತಾಲ್ಲೂಕು ಮಾತ್ರವಲ್ಲದೆ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಗೋ ಶಾಲೆ ತೆರೆಯಬೇಕು’ ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

‘ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿಗಳಿವೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ಮಾಹಿತಿ ನೀಡಬೇಕು. ಅಂತೆಯೇ, ಬೀಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ರೂಪಿಸಲಾಗಿದೆಯೇ ಎಂಬ ಬಗ್ಗೆಯೂ ವಿವರಣೆ ನೀಡಬೇಕು’ ಎಂದು ಸರ್ಕಾರಕ್ಕೆ ಸೂಚಿಸಿತು.

‘ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ. ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ